Puneeth Rajkumar : ಅಪ್ಪು ನಿಧನದ ಅಘಾತಕ್ಕೆ ಮತ್ತೊಬ್ಬ ಅಭಿಮಾನಿ ಸಾವು

ತುಮಕೂರು : ಪವರ್‌ ಸ್ಟಾರ್‌ ಪುನೀತ್‌ ರಾಜ್‌ ಕುಮಾರ್‌ ಹೃದಾಘಾತದಿಂದ ನಿಧನರಾದ ಸುದ್ದಿ ಕಟೂ ಸತ್ಯವಾದರು ಕೂಡ ಯಾರಿಂದಲೂ ಅದನ್ನು ಒಪ್ಪಿಕೊಳ್ಳುವುದಕ್ಕೆ ಆಗುತ್ತಿಲ್ಲ. ಕನ್ನಡ ಚಿತ್ರರಂಗ ಪವರ್‌ ಆಗಿದ್ದ ಪವರ್‌ ಸ್ಟಾರ್‌ ಪುನೀತ್‌ ಮತ್ತೊಬ್ಬ ಅಭಿಮಾನಿ ಶ್ರೀನಿವಾಸ್‌ ಬಾರದ ಲೋಕಕ್ಕೆ ಪಯಣಿಸಿದ್ದಾರೆ.

ತುಮಕೂರು ತಾಲುಕಿನ ಹಿರೇಹಳ್ಳಿಯ ಅಪ್ಪು ಶ್ರೀನಿವಾಸ್‌ ( 32 ವರ್ಷ) ಪುನೀತ್ ರಾಜ್‌ ಕುಮಾರ್‌ ಅಂತಿಮ ದರ್ಶನ ಪಡೆದು ಮನೆಗೆ ಮರಳಿದ್ದಾರೆ. ಮನೆಗೆ ಬರುತ್ತಿದ್ದಂತೆಯೇ ಶ್ರೀನಿವಾಸ್‌ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ನಂತರ ಶ್ರೀನಿವಾಸ್‌ ಅವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಯಿತು.

ಇದನ್ನೂ ಓದಿ: Puneeth Rajkumar : 2 ಕಣ್ಣುಗಳ ಮೂಲಕ ನಾಲ್ಕು ಮಂದಿಗೆ ದೃಷ್ಟಿ ನೀಡಿದ ಪುನೀತ್‌ ರಾಜ್‌ ಕುಮಾರ್‌

ಆದರೆ ಚಿಕಿತ್ಸೆ ಫಲಕಾರಿಯಾಗದೇ ಜಿಲ್ಲಾಸ್ಪತ್ರೆಯಲ್ಲಿ ಶ್ರೀನಿವಾಸ್‌ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ನಿನ್ನೇ ಅಷ್ಟೇ ಹೆಬ್ಬೂರಿನಲ್ಲಿ ಭರತ್‌ ಎಂಬ ಪುನೀತ್‌ ರಾಜ್‌ ಕುಮಾರ್‌ ಅಭಿಮಾನಿ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾನೆ. ಈ ಜಿಲ್ಲೆಯಲ್ಲಿ ಇದು ಪುನೀತ್‌ ಅಭಿಮಾನಿಯ 2 ನೇ ಸಾವಿನ ಪ್ರಕರಣವಾಗಿದೆ.

ಇದನ್ನೂ ಓದಿ: Puneeth- Padma shri Award : ಪುನೀತ್ ಗೆ ಸಲ್ಲಲಿ ಪದ್ಮಶ್ರೀ: ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹ

(Another fan dies after being hit by Appu’s death)

Comments are closed.