ಭಾನುವಾರ, ಏಪ್ರಿಲ್ 27, 2025
Homekarnatakaತಮಿಳುನಾಡಿಗೆ ಕಾವೇರಿ ನೀರು ಬಿಡಿ : ಕರ್ನಾಟಕಕ್ಕೆ ಕಾವೇರಿ ಪ್ರಾಧಿಕಾರದ ಸೂಚನೆ

ತಮಿಳುನಾಡಿಗೆ ಕಾವೇರಿ ನೀರು ಬಿಡಿ : ಕರ್ನಾಟಕಕ್ಕೆ ಕಾವೇರಿ ಪ್ರಾಧಿಕಾರದ ಸೂಚನೆ

- Advertisement -

ಬೆಂಗಳೂರು : ಕರ್ನಾಟಕದ ಕೆಆರ್​ಎಸ್​ ಜಲಾಶಯದಿಂದ ತಮಿಳುನಾಡಿಗೆ ಆರರಿಂದ ಏಳು ಟಿಎಂಸಿ ನೀರು ಹರಿಸುವಂತೆ ಕಾವೇರಿ ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಎಸ್​.ಕೆ. ಹಲ್ದರ್​ ಸೂಚನೆ ನೀಡಿದ್ದಾರೆ.

ಸುಪ್ರೀಂ ಕೋರ್ಟ್​ ಆದೇಶದಂತೆ ಆಗಸ್ಟ್​ ತಿಂಗಳ ಅಂತ್ಯದೊಳಗಾಗಿ 86 ಟಿಎಂಸಿ ನೀರು ಬಿಡುಗಡೆ ಮಾಡಬೇಕಿತ್ತು. ಆದರೆ ಹವಾಮಾನ ಇಲಾಖೆ ನೀಡಿರುವ ವರದಿ ಆಧರಿಸಿ ಕೆಆರ್​ಎಸ್​ ಜಲಾಶಯದ ಭಾಗದಲ್ಲಿರುವ ಪ್ರಸ್ತುತ ಪರಿಸ್ಥಿತಿಯನ್ನು ವಿವರಿಸಿದ ಕರ್ನಾಟಕದ ಅಧಿಕಾರಿಗಳು ನೀರು ಬಿಡುಗಡೆ ಪ್ರಮಾಣದಲ್ಲಿ ವಿನಾಯ್ತಿ ಕೇಳಿದ್ದಾರೆ.

ಇದನ್ನೂ ಓದಿ: ಚಾಮುಂಡೇಶ್ವರಿಯಲ್ಲಿ ಕಾನೂನು ಸುವ್ಯವಸ್ಥೆ ಹತೋಟಿಗೆ ಬರುವಂತೆ ಪ್ರಾರ್ಥಿಸಿದ್ದೇನೆ : ಗ್ರಹ ಸಚಿವ ಆರಗ ಜ್ಞಾನೇಂದ್ರ

ಕಾವೇರಿ ತೀರದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ. ಹೀಗಾಗಿ ಕೆಆರ್​ಎಸ್​ ಜಲಾಶಯ ಕೂಡ ತುಂಬಿಲ್ಲ. ಈ ಬಾರಿ ಮಳೆಯಲ್ಲಿ 25 ಪ್ರತಿಶತ ಕೊರತೆ ಕಂಡುಬಂದಿದೆ. ಹೀಗಾಗಿ ಜೂನ್​ ಹಾಗೂ ಜುಲೈ ತಿಂಗಳ ಪಾಲಿನ ನೀರನ್ನು ಸದ್ಯಕ್ಕೆ ಬಿಡುಗಡೆ ಮಾಡುವುದು ಸಾಧ್ಯವಿಲ್ಲ ಎಂದು ಕರ್ನಾಟಕದ ಅಧಿಕಾರಿಗಳು ಸಭೆಯಲ್ಲಿ ವಿವರಿಸಿದ್ದಾರೆ.

ಕರ್ನಾಟಕವು ಆಗಸ್ಟ್​ ಅಂತ್ಯದ ವೇಳೆಗೆ ತಮಿಳುನಾಡಿಗೆ 86 ಟಿಎಂಸಿ ನೀರು ಬಿಡುಗಡೆ ಮಾಡಬೇಕಿತ್ತು. ಆದರೆ ಕರ್ನಾಟಕವು 57 ಟಿಎಂಸಿ ನೀರು ಬಿಡುಗಡೆ ಮಾಡಿರೋದಾಗಿ ಹೇಳಿದೆ. ಸೆಪ್ಟೆಂಬರ್​ ತಿಂಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ. ಹೀಗಾಗಿ ಸೆಪ್ಟೆಂಬರ್​ ತಿಂಗಳಲ್ಲಿ ನೀರನ್ನು ಬಿಡುವಂತೆ ಸೂಚನೆ ನೀಡಿದ್ದೇನೆ. ಉತ್ತಮ ಮಳೆಯಾಗುತ್ತಿದ್ದಂತೆ ಬಾಕಿ ನೀರನ್ನು ಬಿಡುವಂತೆ ಹಲ್ದಾರ್​ ಸಭೆಯಲ್ಲಿ ಸೂಚನೆ ನೀಡಿರೋದಾಗಿ ಹೇಳಿದ್ದಾರೆ. ದೆಹಲಿಯಲ್ಲಿ ಇಂದು ನಡೆದ 13ನೇ ಪ್ರಾಧಿಕಾರದ ಸಭೆಯಲ್ಲಿ ಹಲ್ದರ್​ ಈ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: Mysore : ಸಿಎಂ ಬೊಮ್ಮಾಯಿ ಸರ್ಕಾರ ಉತ್ತಮ ಆಡಳಿತ ನೀಡುತ್ತಿದೆ : ಅರುಣ್ ಸಿಂಗ್

(Cauvery Authority Noticed for Karnataka Leave Cauvery Water to Tamil Nadu)

RELATED ARTICLES

Most Popular