ಬುಧವಾರ, ಏಪ್ರಿಲ್ 30, 2025
HomeBreakingKRS Dam : ಕೆಆರ್‌ಎಸ್‌ ಡ್ಯಾಂ ಬಳಿ ಕಲ್ಲು ಕುಸಿತ : ಹೆಚ್ಚಿದ ಆತಂಕ

KRS Dam : ಕೆಆರ್‌ಎಸ್‌ ಡ್ಯಾಂ ಬಳಿ ಕಲ್ಲು ಕುಸಿತ : ಹೆಚ್ಚಿದ ಆತಂಕ

- Advertisement -

ಮಂಡ್ಯ : ಕೆಆರ್‌ಎಸ್‌ ಡ್ಯಾಂ ಬಿರುಕು ಬಿಟ್ಟಿದೆ ಅನ್ನೋ ಸುದ್ದಿ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿತ್ತು. ಇದರ ಬೆನ್ನಲ್ಲೇ ಕೆಆರ್‌ಎಸ್‌ ಡ್ಯಾಂನಲ್ಲಿ ಕಲ್ಲುಗಳು ಕುಸಿಯುತ್ತಿದೆ. ಇದರಿಂದಾಗಿ ಈ ಭಾಗದಲ್ಲಿ ಜನರಲ್ಲಿ ಆತಂಕ ಮನೆ ಮಾಡಿದೆ.

ಮಂಡ್ಯ ಸಂಸದೆ ಸುಮಲತಾ ಕೆಆರ್‌ಎಸ್‌ ಡ್ಯಾಂನಲ್ಲಿ ಬಿರುಕು ಕಾಣಿಸಿಕೊಂಡಿದೆ. ಅಲ್ಲದೇ ಅಕ್ರಮ ಗಣಿಗಾರಿಕೆಯಿಂದಲೇ ಡ್ಯಾಂ ಗೆ ಅಪಾಯವಿದೆ ಅಂತಾನೂ ಆರೋಪ ಮಾಡಿದ್ದರು. ಆದ್ರೀಗ ಗಾರ್ಡನ್ ನಿಂದ ಕೆಆರ್ ಎಸ್ ಜಲಾಶಯದ ಮೇಲೆ ಹೋಗುವ ರಸ್ತೆಯಲ್ಲಿ ಕಲ್ಲು ಕುಸಿತವಾಗಿದ್ದು, ಡ್ಯಾಂನ ಕಲ್ಲುಗಳು ಕುಸಿತವಾಗಿರವುದು ಸುಮಲತಾ ಹೇಳಿಕೆ ಪುಷ್ಟಿ ನೀಡುವಂತಿದೆ.

ಸುಮಾರು 90 ವರ್ಷಗಳ ಹಿಂದೆ ನಿರ್ಮಾಣಗೊಂಡಿರುವ ಡ್ಯಾಂನಲ್ಲಿ ಇದೇ ಮೊದಲ ಬಾರಿಗೆ ಕಲ್ಲುಗಳು ಕುಸಿತವಾಗಿದ್ದು, ಡ್ಯಾಂ ಸುರಕ್ಷತೆಗೆ ನಿರ್ಮಾಣ ಮಾಡಿದ್ದ ತಡೆಗೋಡೆಯ ಕಲ್ಲುಗಳು ಕುಸಿತವಾಗಿದೆ. ಇದೀಗ ನೀರಾವರಿ ನಿಗಮದ ಅಧಿಕಾರಿಗಳು ದುರಸ್ತಿ ಕಾರ್ಯ ಕೈಗೊಂಡಿದ್ದಾರೆ.

ಇದನ್ನೂ ಓದಿ : ಯಾರಿಗೂ ಹೇಳ್ಬೇಡಿ ಹೊಸ ಟೀಂ ಮಾಡ್ತೇವೆ : 3 ಜನರಲ್ಲಿ ಒಬ್ಬರು ಸಿಎಂ : ಕಟೀಲ್‌ ಆಡಿಯೋ ವೈರಲ್‌

ಇದೀಗ ಡ್ಯಾಂನಲ್ಲಿನ ಕಲ್ಲುಗಳು ಕುಸಿದಿರೋದು ಸಂಸದೆ ಸುಮಲತಾ ಹೇಳಿಕೆಗೆ ಬಲಬಂದತಾಗಿದೆ. ಈ ಹಿನ್ನೆಲೆಯಲ್ಲಿ ಕೆಆರ್‌ಎಸ್‌ ಡ್ಯಾಂ ಸುರಕ್ಷತೆಯ ಕುರಿತು ಪರಿಶೀಲನೆ ನಡೆಯುವ ಸಾಧ್ಯತೆಯೂ ಇದೆ. ಅಲ್ಲದೇ ಜನರ ಭಯವನ್ನು ಹೋಗಲಾಡಿಸುವ ನಿಟ್ಟಿನಲ್ಲಿಯೂ ಸರಕಾರ ದಿಟ್ಟ ಕ್ರಮಕೈಗೊಳ್ಳುತ್ತಾ ಅನ್ನೋದನ್ನು ಕಾದುನೋಡಬೇಕಾಗಿದೆ.

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular