ಭಾನುವಾರ, ಏಪ್ರಿಲ್ 27, 2025
Homekarnatakaಬೀಗರೂಟ ಸೇವಿಸಿದ್ದ24 ಮಂದಿ ಅನಾರೋಗ್ಯ, ಆಸ್ಪತ್ರೆಗೆ ದಾಖಲು

ಬೀಗರೂಟ ಸೇವಿಸಿದ್ದ24 ಮಂದಿ ಅನಾರೋಗ್ಯ, ಆಸ್ಪತ್ರೆಗೆ ದಾಖಲು

- Advertisement -

ತುಮಕೂರು (Tumkur ) : ಬೀಗರೂಟ ಮಾಡಿದ್ದ ನಂತರ ವಾಂತಿ, ಬೇಧಿ ಕಾಣಿಸಿಕೊಂಡು ಸುಮಾರು 24 ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಶ್ರೀರಂಗಪುರ ತಾಂಡಾದಲ್ಲಿ ನಡೆದಿದೆ. ಅಸ್ವಸ್ಥಗೊಂಡಿದ್ದವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

Tumkur 24 people fell sick eating baaduta Kannada News
Image Credit to Original Source

ತುಮಕೂರು ಜಿಲ್ಲೆಯ ಪಾವಗಡದ ನಾಗೇನಹಳ್ಳಿ ತಾಂಡಾದಲ್ಲಿ ಮದುವೆ ನಡೆದಿದೆ. ಅಲ್ಲದೇ ಅಗಸ್ಟ್ 16 ರಂದು ಶ್ರೀರಂಗಪುರ ತಾಂಡಾದಲ್ಲಿ ಬೀಗರೂಟ ನಡೆದಿತ್ತು. ಬೀಗರು ಊಟ ಮಾಡಿ ಮನೆಗೆ ತೆರಳಿದ ವೇಳೆಯಲ್ಲಿ ಹಲವರಲ್ಲಿ ಅನಾರೋಗ್ಯ ಕಾಣಿಸಿಕೊಂಡಿತ್ತು. ಅಸ್ವಸ್ಥಗೊಂಡವರನ್ನು ಪಾವಗಡ, ಬೆಂಗಳೂರು, ಹಿಂದೂಪುರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇದನ್ನೂ ಓದಿ : ಕಾರ್ಕಳ ಪರಶುರಾಮ ಥೀಮ್‌ ಪಾರ್ಕ್‌ ಕಾಮಗಾರಿ ಪೂರ್ಣಗೊಳಿಸಲು ಹೈಕೋರ್ಟ್‌ ಆದೇಶ : ಕಾಂಗ್ರೆಸ್‌ಗೆ ತೀವ್ರ ಮುಖಭಂಗ

ಬೀಗರೂಟ ಸೇವನೆ ಮಾಡಿ ಅಸ್ವಸ್ಥಗೊಂಡಿದ್ದ ನಾಗೇನಹಳ್ಳಿ ತಾಂಡಾಕ್ಕೆ ಎಸಿ, ತಹಶೀಲ್ದಾರ್‌, ಆರೋಗ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ನೀರಿನ ಸ್ಯಾಂಪಲ್‌ಗಳನ್ನು ಪಡೆದುಕೊಂಡಿದ್ದು, ಆದರೆ ಊಟ ಅಥವಾ ಕುಡಿದಿರುವ ನೀರಿನಲ್ಲಿ ಯಾವುದೇ ವ್ಯತ್ಯಾಸ ಕಂಡುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಊಟಕ್ಕೂ ಮೊದಲೇ ಬೀಗರೂಟಕ್ಕೆ ಬಂದಿರುವವರು ಕಳ್ಳಬಟ್ಟಿ ಸೇವನೆ ಮಾಡಿದ್ದರು ಎಂಬ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ : ಬೈಂದೂರು : ಮೆಹಂದಿ ಶಾಸ್ತ್ರದ ವೇಳೆ ಮದುಮಗ ಎಸ್ಕೇಪ್‌, ಮದುವೆಯೇ ರದ್ದು !

Tumkur 24 people fell sick eating baaduta Kannada News

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular