ಶನಿವಾರ, ಜೂನ್ 14, 2025
Homekarnatakaಉಡುಪಿ ಆದರ್ಶ ಆಸ್ಪತ್ರೆ: ಆದರ್ಶ ಶಿಕ್ಷಕ ಪ್ರಶಸ್ತಿ ಪ್ರಧಾನ

ಉಡುಪಿ ಆದರ್ಶ ಆಸ್ಪತ್ರೆ: ಆದರ್ಶ ಶಿಕ್ಷಕ ಪ್ರಶಸ್ತಿ ಪ್ರಧಾನ

ಸುಶಿಕ್ಷಿತ ಸಮಾಜ ನಿರ್ಮಾಣದ ಜೊತೆಗೆ ರಾಷ್ಟ್ರ ಭಕ್ತರನ್ನು ರೂಪಿಸುವ ಶಿಕ್ಷಣದ ಅಗತ್ಯವಿದೆ. ನಮ್ಮ ಹಿರಿಯರು, ನಮ್ಮ ಸಂವಿಧಾನ ಶಿಕ್ಷಣ ಇಲಾಖೆಯ ಮೂಲ ಆಶಯವನ್ನು ಅರ್ಥ ಮಾಡಿಕೊಂಡು ಮಕ್ಕಳಿಗೆ ಶಿಕ್ಷಣವನ್ನು ನೀಡುವ ಕಾರ್ಯ ಆಗಬೇಕಾಗಿದೆ.

- Advertisement -

Udupi Adarsha Hospital : ಉಡುಪಿ : ಸುಶಿಕ್ಷಿತ ಸಮಾಜ ನಿರ್ಮಾಣದ ಜೊತೆಗೆ ರಾಷ್ಟ್ರ ಭಕ್ತರನ್ನು ರೂಪಿಸುವ ಶಿಕ್ಷಣದ ಅಗತ್ಯವಿದೆ. ನಮ್ಮ ಹಿರಿಯರು, ನಮ್ಮ ಸಂವಿಧಾನ ಶಿಕ್ಷಣ ಇಲಾಖೆಯ ಮೂಲ ಆಶಯವನ್ನು ಅರ್ಥ ಮಾಡಿಕೊಂಡು ಮಕ್ಕಳಿಗೆ ಶಿಕ್ಷಣವನ್ನು ನೀಡುವ ಕಾರ್ಯ ಆಗಬೇಕಾಗಿದೆ. ಈ ಮೂಲಕ ವಿದ್ಯಾರ್ಥಿಗಳು ತಮ್ಮ ಬದುಕನ್ನು ಕಟ್ಟಿಕೊಂಡು ರಾಷ್ಟ್ರ ಭಕ್ತಿಯನ್ನು ಮೈಗೂಡಿಕೊಳ್ಳಬೇಕು ಎಂದು ಉಡುಪಿ – ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

Udupi Adarsha Hospital Teacher Day Celebration
Image Credit to Original Source

ಶಿಕ್ಷಕರ ದಿನಾಚರಣೆಯ ಹಿನ್ನೆಲೆಯಲ್ಲಿ ಉಡುಪಿಯ ಆದರ್ಶ ಚಾರಿಟೆಬಲ್ ಟ್ರಸ್ಟ್‌, ಆದರ್ಶ ಆಸ್ಪತ್ರೆ,, ಆದರ್ಶ ಇನ್‌ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್, ಆದರ್ಶ ಕಾಲೇಜ್ ಆಫ್ ನರ್ಸಿಂಗ್, ಆದರ್ಶ ಪ್ಯಾರಮೆಡಿಕಲ್ ಕಾಲೇಜು, ಶಾಲಾ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಡಾ| ಸರ್ವೇಪಲ್ಲಿ ರಾಧಾಕೃಷ್ಣನ್‌ರವರ ಜನ್ಮ ಜಯಂತಿ ಹಿನ್ನೆಲೆಯಲ್ಲಿ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಅಲೆವೂರು ಕೆಮ್ತೂರ್ ರಸ್ತೆಯಲ್ಲಿರುವ ಆದರ್ಶ ಸಮೂಹ ವಿದ್ಯಾಸಂಸ್ಥೆಗಳ ಸಂಕೀರ್ಣದಲ್ಲಿ ನಡೆದ ಆದರ್ಶ ಶಿಕ್ಷಕ ಪ್ರಶಸ್ತಿ’ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ್ರು.

ಇದನ್ನೂ ಓದಿ : LIC Plans : ಎಲ್ಐಸಿಯ ಈ ಪಾಲಿಸಿಗಳೆಲ್ಲಾ ಸೆಪ್ಟೆಂಬರ್ 30ಕ್ಕೆ ಅಂತ್ಯ

Udupi Adarsha Hospital Teacher Day Celebration
Image Credit to Original Source

ಉಡುಪಿ ಶಾಸಕ ಯಶ್‌ಪಾಲ್ ಎ. ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಶುಭಹಾರೈಸಿದರು. ಅಪರ ಜಿಲ್ಲಾಧಿಕಾರಿ ಮಮತಾದೇವಿ ಜಿ.ಎಸ್., ಅಲೆವೂರು ಗ್ರಾ.ಪಂ. ಅಧ್ಯಕ್ಷ ಯತೀಶ್ ಕುಮಾರ್, ಪೂರ್ಣಪ್ರಜ್ಞ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನ ಶ್ರೀರಮಣ ಐತಾಳ್, ನಿರ್ದೇಶಕ ಡಿಡಿಪಿಐ ಗಣಪತಿ ಕೆ., ಆದರ್ಶ ಆಸ್ಪತ್ರೆಯ ಸಿಇಒ ವಿಮಲಾ ಚಂದ್ರಶೇಖರ್, ಶ್ರೀ ಆದರ್ಶ ಕಾಲೇಜ್ ಆಫ್ ನರ್ಸಿಂಗ್‌ನ ಪ್ರಾಂಶುಪಾಲೆ ಸುದೀನಾ ಉಡುಪಿಯ ಆದರ್ಶ ಇನ್ ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ , ಆದರ್ಶ ಪ್ಯಾರಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಪ್ರೊ| ರವಿಕುಮಾರ್ ಟಿ.ಎನ್. ಉಪಸ್ಥಿತರಿದ್ದರು.

ಇದನ್ನೂ ಓದಿ : ಭಾಗ್ಯಲಕ್ಷ್ಮಿ ಯೋಜನೆ ಗುಡ್‌ನ್ಯೂಸ್‌ : ಫಲಾನುಭವಿಗಳ ಖಾತೆಗೆ ಮೆಚ್ಯುರಿಟಿ ಹಣ

Udupi Adarsha Hospital Teacher Day Celebration
Image Credit to Original Source

ಶಿಕ್ಷಕರ ದಿನಾಚರಣೆಯ ಹಿನ್ನೆಲೆಯಲ್ಲಿ ಡಾ| ಸರ್ವೇಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಇದೇ ಸಂದರ್ಜಿಭದಲ್ಲಿ ಉಡುಪಿ ಜಿಲ್ಲೆಯ ಸಾಧಕ 30 ಶಿಕ್ಷಕರಿಗೆ ‘ಆದರ್ಶ ಶಿಕ್ಷಕ ಪ್ರಶಸ್ತಿ’ ಪ್ರದಾನ ಮಾಡಿ ಸಮ್ಮಾನಿಸಲಾಯಿತು.

Udupi Adarsha Hospital Teacher Day Celebration
Image Credit to Original Source

ಈ ಬಾರಿ ಮಲೇಷ್ಯಾದ ಆಯೋಜನೆಯಲ್ಲಿ ನಡೆಯುತ್ತಿರುವ ತ್ರೋಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸಲಿರುವ ಆದರ್ಶ ಇನ್‌ ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್‌ನ ವಿದ್ಯಾರ್ಥಿನಿ ಆಗಿರುವ ನಿಧಿ ಪ್ರಭು ಅವರನ್ನು ಗೌರವಿಸಲಾಯಿತು. ಆದರ್ಶ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ| ಜಿ.ಎಸ್. ಚಂದ್ರಶೇಖರ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಶಿಕ್ಷಕ ಪ್ರಶಾಂತ್ ಶೆಟ್ಟಿ ಹಾವಂಜೆ ನಿರೂಪಿಸಿ, ಅನುಶ್ರೀ ವಂದಿಸಿದರು.

Udupi Adarsha Hospital Teacher Day Celebration

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular