ಉಡುಪಿ : ಉಡುಪಿ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿಕೆ (udupi new dc Swaroopa TK) ಅವರು ಇಂದು ಅಧಿಕಾರ ಸ್ವೀಕಾರ ಮಾಡಿದ್ದಾರೆ. ನಿಕಟಪೂರ್ವ ಜಿಲ್ಲಾಧಿಕಾರಿಗಳಾಗಿರುವ ಡಾ.ಕೆ. ವಿದ್ಯಾ ಕುಮಾರಿ ಅವರಿಂದ ಸ್ವರೂಪ ಟಿಕೆ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಸ್ವರೂಪ ಟಿಕೆ ಅವರು ಈ ಹಿಂದೆ ಬೆಂಗಳೂರಿನ ಆರ್ಡಿಪಿಆರ್ ಇ- ಗವರ್ನೆನ್ಸ್ ನಿರ್ದೇಶಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಉಡುಪಿ ಜಿಲ್ಲಾಧಿಕಾರಿಯಾಗಿದ್ದ ವಿದ್ಯಾ ಕುಮಾರಿ ಅವರು ಜನಪರ ಕಾರ್ಯಗಳಿಂದಲೇ ಜನರ ಮೆಚ್ಚುಗೆಗೆ ಪಾತ್ರರಾಗಿದ್ದರು. ಆದ್ರೀಗ ಉಡುಪಿಯಿಂದ ವರ್ಗಾವಣೆ ಆಗಿದ್ದರೂ ಕೂಡ ಅವರಿಗೆ ಸ್ಥಳನಿಗದಿ ಪಡಿಸಿಲ್ಲ.
Also Read : ಬ್ರಹ್ಮಾವರ : ಖಾಸಗಿ ಶಾಲಾ ಬಸ್ಸಿಗೆ ಲಾರಿ ಢಿಕ್ಕಿ : ವಿದ್ಯಾರ್ಥಿಗಳಿಗೆ ಗಾಯ
ದಕ್ಷಿಣ ಕನ್ನಡಕ್ಕೆ ಹೊಸ ಜಿಲ್ಲಾಧಿಕಾರಿ ದರ್ಶನ್ ಎಚ್ವಿ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್ವಿ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈ ಹಿಂದೆ ದಕ್ಷಿ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈ ಮುಗಿಲನ್ ಅವರನ್ನು ಇನ್ಸ್ಪೆಕ್ಟರ್ ಜನರಲ್ ಆಫ್ ರಿಜಿಸ್ಟ್ರೇಷನ್ ಆಂಡ್ ಸ್ಟ್ಯಾಂಪ್ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ.
Also Read : PM-SYM Yojana: ಈ ಯೋಜನೆಯಡಿ ಪ್ರತೀ ತಿಂಗಳು 3000 ರೂ.. : ಪುರುಷರಿಗೂ ಸಿಗುತ್ತೆ ಹಣ
ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿರುವ ದರ್ಶನ್ ಎಚ್ವಿ ಅವರು ಈ ಹಿಂದೆ ಬೆಂಗಳೂರಿನ ವಾಣಿಜ್ಯ ತೆರಿಗೆಗಳ ಹೆಚ್ಚುವರಿ ಆಯುಕ್ತರಾಗಿ ಸೇನೆ ಸಲ್ಲಿಸುತ್ತಿದ್ದರು. ಉಡುಪಿ, ದಕ್ಷಿಣ ಕನ್ನಡ ಮಾತ್ರವಲ್ಲದೇ, ಹಾಸನ, ಬಾಗಲಕೋಟೆ, ಕೊಪ್ಪಳ ಜಿಲ್ಲೆಗಳ ಜಿಲ್ಲಾಧಿಕಾರಿಗಳನ್ನೂ ಕೂಡ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿತ್ತು.
udupi new dc Swaroopa TK In Kannada News