ಉಡುಪಿ : ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಬಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದ್ದು, ಜೂನ್ 12ರಂದು ರೆಡ್ ಅಲರ್ಟ್ ಘೋಷಿಸಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರು ಆದೇಶ ಹೊರಡಿಸಿದ್ದಾರೆ.
ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಆದರೆ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಐಟಿಐ ಹಾಗೂ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳಿಗೆ ರಜೆ ಇರುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ : ಗೃಹಜ್ಯೋತಿ ಗ್ರಾಹಕರಿಗೆ ಸರಕಾರದ ವಂಚನೆ : ಮೆಸ್ಕಾಂ ಉದ್ಯೋಗಿಗಳ ಪಿಎಫ್ + ಗ್ರಾಚ್ಯುಟಿಗೆ ಗ್ರಾಹಕರ ಹಣ
Udupi School Holiday : ಪದವಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಿಲ್ಲ ರಜೆ

ಕರಾವಳಿ ಜಿಲ್ಲೆಗಳಲ್ಲಿ ಬಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ. ವಿದ್ಯಾರ್ಥಿಗಳನ್ನು ಕಾಲೇಜು ಮುಗಿದ ನಂತರದಲ್ಲಿ ಸುರಕ್ಷಿತವಾಗಿ ಮನೆಗೆ ತಲುಪಿಸುವ ಜವಾಬ್ದಾರಿಯನ್ನು ಕಾಲೇಜಿನ ಪ್ರಾಂಶುಪಾಲರೇ ಕೈಗೊಳ್ಳಬೇಕು.
ಇದನ್ನೂ ಓದಿ : Ration Card ekyc : ಜೂನ್ 30 ಕೊನೆಯ ದಿನ : ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
ಉಡುಪಿ ಜಿಲ್ಲೆಯಲ್ಲಿ ಜೂನ್ 15ರ ವರೆಗೆ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದ್ದು, ಮುಂದಿನ ನಾಲ್ಕು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಿದೆ. ಕಳೆದ ಒಂದು ವಾರಗಳಿಂದಲೂ ಮಳೆ ಸ್ವಲ್ಪ ಬಿಡುವು ಪಡೆದುಕೊಂಡಿದ್ದು, ಇದೀಗ ಮತ್ತೆ ಮಳೆ ಆರ್ಭಟಿಸುತ್ತಿದೆ.
Udupi School Holiday Heavy Rain Red Alert June 12 Kannada News