UNLOCK : ಲಾಕ್ ಡೌನ್ ತೆರವಾದ್ರೂ ರಸ್ತೆಗಿಳಿಯಲ್ಲ ಬಸ್

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ತಗ್ಗಿದ ಹಿನ್ನೆಲೆಯಲ್ಲಿ ಸರಕಾರ ಅನ್ ಲಾಕ್ ಜಾರಿ ಮಾಡಿದೆ. ಆದರೆ ರಾಜ್ಯದಲ್ಲಿ 19 ಜಿಲ್ಲೆಗಳಲ್ಲಿ ಲಾಕ್ ಡೌನ್ ತೆರವು ಮಾಡಿದ್ರೂ ಕೂಡ ಕೆಎಸ್ಆರ್ ಟಿಸಿ, ಬಿಎಂಟಿಸಿ ಹಾಗೂ ಖಾಸಗಿ ಬಸ್ ಗಳು ರಸ್ತೆ ಇಳಿಯೋದಿಲ್ಲ.

ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ 19 ಜಿಲ್ಲೆಗಳಲ್ಲಿ ಅನ್ ಲಾಕ್ ಪ್ರಕ್ರಿಯೆ ಸೋಮವಾರದಿಂದ ಜಾರಿಗೆ ಬರಲಿದೆ. ಅಗತ್ಯ ವಸ್ತುಗಳ ಖರೀದಿಗೆ ಮಧ್ಯಾಹ್ನ 2 ಗಂಟೆಯ ವರೆಗೂ ಅವಕಾಶವನ್ನು ಕಲ್ಪಿಸಲಾಗಿದೆ. ಆದರೆ ಬಸ್ ಸಂಚಾರ ಮಾತ್ರ ಇರೋದಿಲ್ಲ.

ಕೆಎಸ್ಆರ್ ಟಿಸಿ, ಬಿಎಂಟಿಸಿ ಸೇರಿದಂತೆ ಯಾವುದೇ ಸರಕಾರಿ ಬಸ್ ಹಾಗೂ ಖಾಸಗಿ ಬಸ್ ಗಳು ರಸ್ತೆ ಇಳಿಯಲು ರಾಜ್ಯ ಸರಕಾರ ಅನುಮತಿಯನ್ನು ನೀಡಿಲ್ಲ. ಆದ್ರೆ ಆಟೋ ಹಾಗೂ ಟ್ಯಾಕ್ಸಿಗಳಲ್ಲಿ ಸಂಚಾರ ಮಾಡಬಹುದಾಗಿದೆ. ಆಟೋ ಹಾಗೂ ಟ್ಯಾಕ್ಸಿಗಳಲ್ಲಿ ಇಬ್ಬರು ಮಾತ್ರವೇ ಸಂಚರಿಸಲು ಅವಕಾಶವನ್ನು ಕಲ್ಪಿಸಲಾಗಿದೆ. ಆದರೆ ಸ್ವತಃ ವಾಹನಗಳನ್ನು ಬಳಸಿ ಸಂಚಾರ ಮಾಡಬಹುದಾಗಿದೆ.

Comments are closed.