Minister Prabhu Chavan:‘ಜಾಮೀನಿನ ಮೇಲೆ ಹೊರಗಿರುವವರಿಂದ ಎಂತಹ ಭಾರತ್ ಜೋಡೋ ನಿರೀಕ್ಷಿಸಬಹುದು’ : ಸಚಿವ ಪ್ರಭು ಚವ್ಹಾಣ್ ವ್ಯಂಗ್ಯ
ಬೀದರ್ : Minister Prabhu Chavan :ದೇಶದಲ್ಲಿ ತನ್ನ ಅಸ್ತಿತ್ವ ಕಡಿಮೆಯಾಗುತ್ತಿದೆ ಎಂಬ ಅರಿವಿನಲ್ಲಿರುವ ಕಾಂಗ್ರೆಸ್ ಪಕ್ಷವು ಹೇಗಾದರೂ ಮಾಡಿ ಮತ್ತೊಮ್ಮೆ ಎಲ್ಲಾ ಕಡೆಗಳಲ್ಲಿ ಅಧಿಕಾರಕ್ಕೆ ಬರಬೇಕೆಂದು ಇನ್ನಿಲ್ಲದ ಪ್ರಯತ್ನವನ್ನು ಮಾಡುತ್ತಿದೆ. ಎಐಸಿಸಿ ಅಧ್ಯಕ್ಷ ಚುನಾವಣೆ, ಭಾರತ್ ಜೋಡೋ ಯಾತ್ರೆ ಹೀಗೆ ಅನೇಕ ಕಾರ್ಯಗಳನ್ನು ಕಾಂಗ್ರೆಸ್ ಮಾಡುತ್ತಿದ್ದು ಬಿಜೆಪಿಗೆ ಠಕ್ಕರ್ ನೀಡುವ ಹುಮ್ಮಸ್ಸಿನಲ್ಲಿದೆ. ಇಂದು ಸೋನಿಯಾ ಗಾಂಧಿ ಕೂಡ ಮಂಡ್ಯದಲ್ಲಿ ರಾಹುಲ್ ಗಾಂಧಿಯ ಭಾರತ್ ಜೋಡೋ ಯಾತ್ರೆಗೆ ಸಾಥ್ ನೀಡಿದ್ದಾರೆ.ಎರಡು ದಿನಗಳ ವಿರಾಮದ ಬಳಿಕ ರಾಜ್ಯದಲ್ಲಿ ಮತ್ತೆ ಭಾರತ್ ಜೋಡೋ ಯಾತ್ರೆ ಆರಂಭಗೊಂಡಿದ್ದು 15 ಸಾವಿರಕ್ಕೂ ಅಧಿಕ ಮಂದಿ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದಾರೆ. ಈ ಎಲ್ಲದರ ನಡುವೆ ಸಚಿವ ಪ್ರಭು ಚವ್ಹಾಣ್ ಕಾಂಗ್ರೆಸ್ನ ಭಾರತ್ ಜೋಡೋ ಯಾತ್ರೆ ಬಗ್ಗೆ ವ್ಯಂಗ್ಯವಾಡಿದ್ದಾರೆ.
ರಾಜ್ಯದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಕೂಡ ಭಾಗಿಯಾಗಿರುವ ವಿಚಾರವಾಗಿ ಬೀದರ್ನಲ್ಲಿ ಮಾತನಾಡಿದ ಸಚಿವ ಪ್ರಭು ಚವ್ಹಾಣ್, ಇದು ಭಾರತ್ ಜೋಡೊ ಯಾತ್ರೆಯಲ್ಲ, ಭಾರತ್ ತೋಡೋ ಯಾತ್ರೆ. ಮೊದಲು ನೀವೆಲ್ಲ ಸೇರಿ ಕಾಂಗ್ರೆಸ್ ಜೋಡೋ ಯಾತ್ರೆ ಮಾಡಿ. ಪಾದಯಾತ್ರೆಯಲ್ಲಿ ಭಾಗಿಯಾಗಿರುವ ಸೋನಿಯಾ, ರಾಹುಲ್, ಪ್ರಿಯಾಂಕಾ, ಡಿ.ಕೆ ಶಿವಕುಮಾರ್ ಇವರೆಲ್ಲರೂ ಜಾಮೀನಿನ ಮೇಲೆ ಹೊರಗಿದ್ದಾರೆ. ಇಂತವರಿಂದ ಎಂತಹ ಭಾರತ್ ಜೋಡೋ ನಿರೀಕ್ಷಿಸಬಹುದು ಎಂದು ಪ್ರಶ್ನಿಸಿದ್ದಾರೆ.
ಮೊದಲು ಕಾಂಗ್ರೆಸ್ ಪಕ್ಷವನ್ನು ಜೋಡಿಸಿಕೊಳ್ಳಿ. ಬಳಿಕ ಭಾರತ್ ಜೋಡೋ ಯಾತ್ರೆ ಮಾಡಿ. ಪಾದಯಾತ್ರೆಯಲ್ಲಿ ಭಾಗಿಯಾಗಿರುವ ಸೋನಿಯಾ ಗಾಂಧಿ ಮೊದಲು ರಾಜ್ಯ ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ಬಂಡಾಯ ಶಮನ ಮಾಡಲಿ. ಕಾಂಗ್ರೆಸ್ ಪಕ್ಷವು ದೇಶದಲ್ಲಿ ಕೇವಲ 2 ರಾಜ್ಯದಲ್ಲಿ ಮಾತ್ರವಿದೆ. ಗೋವಾ ಸೇರಿದಂತೆ ಎಲ್ಲೆಡೆ ಶಾಸಕರು ಹಾಗೂ ಪಕ್ಷದ ಹಿರಿಯ ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಗುಡ್ಬೈ ಹೇಳ್ತಿದ್ದಾರೆ. ಹೀಗಾಗಿ ಮೊದಲು ನಿಮ್ಮ ಪಕ್ಷ ಜೋಡೋ ಯಾತ್ರೆ ಮಾಡಿ. ಇವರ ಭಾರತ್ ಜೋಡೋ ಯಾತ್ರೆಯಿಂದ ರಾಜ್ಯದ ಮೇಲೆ ಯಾವುದೇ ಪರಿಣಾಮ ಬೀರೋದಿಲ್ಲ ಎಂದು ಗುಡುಗಿದ್ದಾರೆ.
ಇದನ್ನು ಓದಿ : Bharat Jodo Yatra : ಮರಿ ಆನೆಗಾಗಿ ಮಿಡಿದ ರಾಹುಲ್ ಗಾಂಧಿ: ಚಿಕಿತ್ಸೆ ಕೊಡಿಸುವಂತೆ ಸಿಎಂ ಗೆ ಪತ್ರ
ಇದನ್ನೂ ಓದಿ : Bharat Jodo Yatra :ಎರಡು ದಿನಗಳ ವಿರಾಮದ ಬಳಿಕ ಮತ್ತೆ ಆರಂಭಗೊಂಡ ಭಾರತ್ ಜೋಡೋ ಯಾತ್ರೆ : ರಾಹುಲ್ ಗಾಂಧಿಗೆ ಸೋನಿಯಾ ಸಾಥ್
‘What Bharat Jodo can be expected from those who are out on bail’: Minister Prabhu Chavan sarcastically
Comments are closed.