Yellow Alert continuation : ಕರಾವಳಿ, ಮಲೆನಾಡಲ್ಲಿ ಇನ್ನೂ 2 ದಿನ ಮಳೆ : ಯೆಲ್ಲೋ ಅಲರ್ಟ್ ಮುಂದುವರಿಕೆ

ಬೆಂಗಳೂರು : (Yellow Alert continuation)ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಇಂದಿನಿಂದ 4 ದಿನ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡು, ಉತ್ತರ ಒಳನಾಡು, ಕರಾವಳಿ, ಬೆಂಗಳೂರು ಸೇರಿದಂತೆ ಹಲವು ಭಾಗದಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ.

ಕರ್ನಾಟಕದ ಬೆಂಗಳೂರು, ಮಲೆನಾಡು, ಕರಾವಳಿ ಸೇರಿದಂತೆ ಹಲವೆಡೆ ಇಂದಿನಿಂದ ನವೆಂಬರ್ 9ರ ವರೆಗೆ ಭಾರೀ ಮಳೆಯಾಗಲಿದ್ದು, 4 ದಿನಗಳ ಕಾಲ ರಾಜ್ಯಾದ್ಯಂತ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ತುಮಕೂರು, ರಾಮನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೊಡಗು, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸೂಚನೆ ನೀಡಲಾಗಿದ್ದು, ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಣೆ೯Yellow Alert continuation) ಮಾಡಲಾಗಿದೆ.

ಇದನ್ನೂ ಓದಿ : BBMP encroachment : ರಾಜಕಾಲುವೆ ಆಯ್ತು ಈಗ ಬೀದಿ ಬದಿ ವ್ಯಾಪಾರಿಗಳ ಸರದಿ: ಒತ್ತುವರಿ ತೆರವಿಗೆ ಸಜ್ಜಾದ ಬಿಬಿಎಂಪಿ

ಮಲೆನಾಡು, ಉತ್ತರ ಒಳನಾಡು, ಬೆಂಗಳೂರು ಸೇರಿದಂತೆ ಕರಾವಳಿ ಭಾಗದಲ್ಲಿ ಇಂದಿನಿಂದ ನ. 9ರವರೆಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನಲ್ಲಿ ಇಂದಿನಿಂದ 4 ದಿನ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಬೆಂಗಳೂರು ನಗರ, ಚಾಮರಾಜನಗರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು , ಈ ಪ್ರದೇಶಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೇ ಬೆಂಗಳೂರಿನ ಸುತ್ತಮುತ್ತ ಮಂಜು ಕವಿಯುವ ಸಾಧ್ಯತೆಯಿದ್ದು ಚಳಿಯ ವಾತಾವರಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ : Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆಯ ಆರ್ಭಟ ; 2 ದಿನ ಯೆಲ್ಲೋ ಅಲರ್ಟ್‌ ಘೋಷಣೆ

ನೆರೆಯ ರಾಜ್ಯವಾದ ತಮಿಳುನಾಡಿನಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ದಕ್ಷಿಣ ತಮಿಳುನಾಡು ಮತ್ತು ಕೇರಳದಲ್ಲಿ ಭಾರೀ ಮಳೆಯಾಗಲಿದೆ. ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗಿಲ್ಗಿಟ್- ಬಾಲ್ಟಿಸ್ತಾನ್ ಮತ್ತು ಮುಜಫರಾಬಾದ್ ಮತ್ತು ಹಿಮಾಚಲ ಪ್ರದೇಶದಲ್ಲಿ ಇಂದು ಚದುರಿದ ರೀತಿಯಲ್ಲಿ ಮಳೆಯಾಗುವ ಸಾಧ್ಯತೆಯಿದ್ದು , ಉತ್ತರಾಖಂಡದಲ್ಲಿ ಹಿಮಪಾತವಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನೀಲಗಿರಿ, ಕರೂರ್, ಕಡಲೂರು, ಅರಿಯಲೂರು, ತಿರುವರೂರು ಮತ್ತು ತಂಜಾವೂರುಗಳಲ್ಲಿ ಹೆಚ್ಚು ಮಳೆಯಾಗುವ ಹಿನ್ನಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದೆಹಲಿಯಲ್ಲಿ ಇಂದಿನಿಂದ ವಿಪರೀತ ಗಾಳಿ ಶುರುವಾಗಲಿದ್ದು, ದಕ್ಷಿಣ ಅಸ್ಸಾಂ ಸುತ್ತಲೂ ಮಂಜು ಕವಿಯುವ ಸಾಧ್ಯತೆಯಿದೆ.

ಇದನ್ನೂ ಓದಿ : Tracking Device :ವಾಹನ ಸವಾರರ ಗಮನಕ್ಕೆ : ವಾಹನಗಳಲ್ಲಿ ಇನ್ಮುಂದೆ ಟ್ರ್ಯಾಕಿಂಗ್ ಡಿವೈಸ್ ಕಡ್ಡಾಯ

ಇಂದು ತಮಿಳುನಾಡು ಮತ್ತು ಕೇರಳದಲ್ಲಿ ಗುಡುಗು ಸಿಡಿಲಿನ ಸಹಿತ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡಿನ ಕಡಲೂರು, ಅರಿಯಲೂರು, ಮೈಲಾಡುತುರೈ, ತಂಜಾವೂರು, ತಿರುವರೂರು, ನೀಲಗಿರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಿಂಚು ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರ ಮತ್ತು ಬೆಂಗಳೂರಿನ ಸುತ್ತಮುತ್ತ ಮಂಜು ಕವಿಯುವ ಸಾಧ್ಯತೆಯಿದೆ

(Yellow Alert continuation) Due to surface cyclone in the Bay of Bengal, there is a possibility of heavy rains across the state including the coast and hills for 4 days from today. The Indian Meteorological Department (IMD) has said that there is a possibility of thundershowers in many parts of the hill country, northern hinterland, coast, Bengaluru and many districts of Karnataka including Bengaluru today.

Comments are closed.