ಟೂರಿಸ್ಟ್ ಗೈಡ್ ಗಳಿಗೆ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರಕಾರ

ಬೆಂಗಳೂರು : ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಜೊತೆಗೆ ಪ್ರವಾಸಿಗರಿಗೆ ಪ್ರವಾಸಿ ತಾಣಗಳ ಕುರಿತು ಮಾಹಿತಿ ನೀಡುತ್ತಿರುವ ಪ್ರವಾಸಿ ಮಾರ್ಗದರ್ಶಿಗಳಿಗೆ ರಾಜ್ಯ ಸರಕಾರ ಗುಡ್ ನ್ಯೂಸ್ ಕೊಟ್ಟಿದೆ.

ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಪ್ರವಾಸೋದ್ಯಮ ಕ್ಷೇತ್ರಕ್ಕೆ ಬಾರೀ ಹೊಡೆತವೇ ಉಂಟಾಗಿದೆ. ಪ್ರಮುಖ ಪ್ರವಾಸಿ ತಾಣಗಳು ಬಂದ್ ಆಗಿವೆ. ಇದೀಗ ರಾಜ್ಯ ಸರಕಾರ ಟೂರಿಸ್ಟ್ ಗೈಡ್ ಗಳಿಗೆ 5 ಸಾವಿರ ರೂಪಾಯಿ ಪರಿಹಾರ ಧನ ನೀಡಲು ಮುಂದಾಗಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೀಶ್ವರ್ ತಿಳಿಸಿದ್ದಾರೆ.

ಅಷ್ಟೇ ಅಲ್ಲಾ ಹೋಟೆಲ್ ಕಾರ್ಮಿಕರಿಗೆ 3 ಸಾವಿರ ರೂಪಾಯಿ ನೀಡುವ ಕುರಿತು ಕೂಡ ಆರ್ಥಿಕ ಇಲಾಖೆ ಚರ್ಚೆ ನಡೆದಿದ್ದು, ಶೀಘ್ರದಲ್ಲಿಯೇ ಅಧಿಕೃತ ಆದೇಶ ಹೊರಬೀಳಲಿದೆ ಎಂದಿದ್ದಾರೆ.

Comments are closed.