ಕಾರ್ಕಳ: ಜಾಗದ ತಕರಾರಿಗೆ ಅಣ್ಣನ ಬರ್ಬರ ಹತ್ಯೆ: ತಮ್ಮನ ಬಂಧನ
ಜಾಗ ಹಾಗೂ ಮನೆಯ ತಕರಾರು ಹಿನ್ನೆಲೆ ಅಣ್ಣನನ್ನೇ ತಮ್ಮ ಹತ್ಯೆಗೈದ ಘಟನೆ ಕಾರ್ಕಳ ತಾಲೂಕಿನ ಕಸಬ ಗ್ರಾಮದ ಮಿತ್ತಬೆಟ್ಟು ಹಿರಿಯಂಗಡಿಯಲ್ಲಿ ನಡೆದಿದೆ. ಮೃತರನ್ನು ರಿಚರ್ಡ್ ಡಿಸೋಜ ಎಂದು ಗುರುತಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ತಮ್ಮ ಹೆರಾಲ್ಡ್ ಡಿಸೋಜನನ್ನು ಕಾರ್ಕಳ ನಗರ ಪೊಲೀಸರು ಬಂಧಿಸಿದ್ದಾರೆ.
ಕಾರ್ಕಳ : ಜಾಗ ಹಾಗೂ ಮನೆಯ ತಕರಾರು ಹಿನ್ನೆಲೆ ಅಣ್ಣನನ್ನೇ ತಮ್ಮ ಹತ್ಯೆಗೈದ ಘಟನೆ ಕಾರ್ಕಳ ತಾಲೂಕಿನ ಕಸಬ ಗ್ರಾಮದ ಮಿತ್ತಬೆಟ್ಟು ಹಿರಿಯಂಗಡಿಯಲ್ಲಿ ನಡೆದಿದೆ. ಮೃತರನ್ನು ರಿಚರ್ಡ್ ಡಿಸೋಜ ಎಂದು ಗುರುತಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ತಮ್ಮ ಹೆರಾಲ್ಡ್ ಡಿಸೋಜನನ್ನು ಕಾರ್ಕಳ ನಗರ ಪೊಲೀಸರು ಬಂಧಿಸಿದ್ದಾರೆ.
ಪೊಲೀಸ್ ಮೂಲಗಳ ಪ್ರಕಾರ, ರಿಚರ್ಡ್ ಡಿಸೋಜ ಮತ್ತು ಹೆರಾಲ್ಡ್ ಡಿಸೋಜರ ನಡುವೆ ಮನೆಯ ಜಾಗಕ್ಕೆ ಸಂಬಂಧಿಸಿದಂತೆ ಹಲವು ದಿನಗಳಿಂದ ವೈಮನಸ್ಸು ಮುಂದುವರಿದಿತ್ತು. ಮೇ 2ರಂದು ಸಂಜೆ ಸುಮಾರು 6 ಗಂಟೆ ವೇಳೆಗೆ ಜಾಗದ ವಿಚಾರವಾಗಿ ಇಬ್ಬರ ನಡುವೆ ಮತ್ತೆ ಗಲಾಟೆ ನಡೆದಿದ್ದು, ವಾಗ್ವಾದ ತಾರಕಕ್ಕೇರಿದ ವೇಳೆ ಆರೋಪಿ ಹೆರಾಲ್ಡ್ ಡಿಸೋಜ ಮರದ ರೀಪು ಅಥವಾ ಇನ್ನಾವುದೋ ಆಯುಧದಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.



