ಕಾಪು: ರಸ್ತೆ ಮಧ್ಯೆ ಬಸ್ ನಿಲ್ಲಿಸಿ ಜಗಳ : ಖಾಸಗಿ ಬಸ್ ಚಾಲಕ, ನಿರ್ವಾಹಕ, ಟೈಮ್ ಕೀಪರ್ ಅರೆಸ್ಟ್

Private Bus Employes Fighting : ಕಾಪು: ಕರಾವಳಿ ಭಾಗದಲ್ಲಿ ಖಾಸಗಿ ಬಸ್ಗಳ ಹಾವಳಿ ನಿಂತಿಲ್ಲ. ಟೈಮಿಂಗ್ ವಿಚಾರದಲ್ಲಿ ಕಿತ್ತಾಟಗಳು ಪ್ರತಿನಿತ್ಯ ನಡೆಯುತ್ತಲೇ ಇರುತ್ತದೆ. ಇದೀಗ ರಸ್ತೆ ಮಧ್ಯೆ ಬಸ್ ನಿಲ್ಲಿಸಿ ಜಗಳವಾಡಿದ ಕಾರಣಕ್ಕೆ ಖಾಸಗಿ ಬಸ್ ಚಾಲಕ, ನಿರ್ವಾಹಕ, ಟೈಮ್ ಕೀಪರ್ ಅನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಉಡುಪಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಾಪು ಪಡು ಗ್ರಾಮದ ಲಕ್ಷ್ಮೀ ಜನಾರ್ದನ ದೇವಸ್ಥಾನದ ಗೋಪುರದ ಬಳಿ ಸಾರ್ವಜನಿಕ ರಸ್ತೆಯ ಮಧ್ಯದಲ್ಲೇ ಬಸ್ಸನ್ನು ನಿಲ್ಲಿಸಿ, ಅದರ ಚಾಲಕ, ನಿರ್ವಾಹಕ ಮತ್ತು ಟೈಮ್ ಕೀಪರ್ಗಳು ಜಗಳವಾಡಿದ್ದಾರೆ.
‘AYRA’ ಹೆಸರಿನ KA-20-AC-0727 ನಂಬ್ರದ ಬಸ್ಸನ್ನು ರಸ್ತೆಯ ಮಧ್ಯಭಾಗದಲ್ಲಿ ನಿಲ್ಲಿಸಿ, ಚಾಲಕ ರೋಲ್ವಿನ್ ನೊರೊನ್ಹ, ನಿರ್ವಾಹಕ ರಾಜೇಶ್ ಶೆಟ್ಟಿ ಹಾಗೂ ಟೈಮ್ ಕೀಪರ್ ಪ್ರವೀಣ್ ಅವರು ಪರಸ್ಪರ ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡು, ಪರಸ್ಪರ ಕೈಕೈ ಮಿಲಾಯಿಸಿದ್ದಾರೆ.
ಇದನ್ನೂ ಓದಿ : ಕುಂದಾಪುರ : ಖಾಸಗಿ ಬಸ್ ಚಾಲಕನ ನಿರ್ಲಕ್ಷ್ಯ, ಕ್ರೇನ್ ಹರಿದು ಯುವಕ ಮೃತ್ಯು
ಈ ಮೂವರ ವರ್ತನೆಯಿಂದಾಗಿ ಸಾರ್ವಜನಿಕರ ಶಾಂತಿಗೆ ಭಂಗ ಉಂಟಾಗಿದ್ದು, ಇತರ ವಾಹನ ಸವಾರರಿಗೆ ಸುಗಮ ಸಂಚಾರಕ್ಕೆ ಅಡ್ಡಿಯಾಗಿದೆ. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು, ಮಧ್ಯಾಹ್ನ 13:30 ಗಂಟೆಗೆ ಬಸ್ ಸಮೇತ ಮೂವರನ್ನು ವಶಕ್ಕೆ ಪಡೆದಿದ್ದಾರೆ.
ಈ ಕುರಿತು ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಾರ್ವಜನಿಕವಾಗಿ ಇಂತಹ ಘಟನೆಗಳು ಮರಕಳಿಸಿದ್ರೆ ನಿರ್ಧಾಕ್ಷಿಣ್ಯ ಕ್ರಮಕೈಗೊಳ್ಳುವ ಎಚ್ಚರಿಕೆಯನ್ನು ನೀಡಿದ್ದಾರೆ.
ಇದನ್ನೂ ಓದಿ : ಬೈಂದೂರು : ಶಾಲಾ ವಾಹನಕ್ಕೆ ನಕಲಿ ವಿಮಾ ಪಾಲಿಸಿ, ಪ್ರಕರಣ ದಾಖಲು
Kaup Private Bus Employes Fighting



