ಉಡುಪಿ: ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ನಡೆದ ಲೋಕಾಯುಕ್ತ ದಾಳಿಯ ಭಾಗವಾಗಿ ಉಡುಪಿ ಜಿಲ್ಲಾ ಅಬಕಾರಿ ಉಪ ಆಯುಕ್ತ (ಡಿಸಿ) ಶ್ರೀನಿವಾಸ್ ಟಿ.ಎಂ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ (Lokayukta Raid in Udupi) ಸುಮಾರು ರೂಪಾಯಿ 8.69 ಕೋಟಿ ಮೌಲ್ಯದ ಅಸಮತೋಲನ ಆಸ್ತಿ ಪತ್ತೆಯಾಗಿದೆ.
ಲೋಕಾಯುಕ್ತ ಮಂಗಳೂರು ವಿಭಾಗದ ಎಸ್ಪಿ ದಿನೇಶ್ ಕುಮಾರ್ ಅವರ ನೇತೃತ್ವದಲ್ಲಿ ಮಾರ್ಚ್ 11 ಮತ್ತು 12ರಂದು ಎರಡು ದಿನಗಳ ಕಾಲ ಈ ಶೋಧ ಕಾರ್ಯಾಚರಣೆ ನಡೆಯಿತು. ಅಧಿಕಾರಿಗೆ ಸಂಬಂಧಿಸಿದಂತೆ ಒಟ್ಟು 15 ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು. ದಾಳಿಯ ವೇಳೆ 11 ನಿವೇಶನಗಳು, 6 ವಾಸದ ಮನೆಗಳು ಹಾಗೂ 31 ಎಕರೆ ಕೃಷಿ ಜಮೀನು ಸೇರಿದಂತೆ ರೂಪಾಯಿ 6,90,64,716 ಮೌಲ್ಯದ ಸ್ಥಿರಾಸ್ತಿಗಳು ಪತ್ತೆಯಾಗಿವೆ.
ಇದರ ಜೊತೆಗೆ ವಿವಿಧ ರೂಪದಲ್ಲಿ ಚರಾಸ್ತಿಯೂ ಪತ್ತೆಯಾಗಿದೆ. ರೂಪಾಯಿ 3,95,941 ನಗದು, ರೂಪಾಯಿ 1,47,50,506 ಮೌಲ್ಯದ ಚಿನ್ನಾಭರಣ, ರೂಪಾಯಿ 17,00,000 ಮೌಲ್ಯದ ವಾಹನಗಳು, ರೂಪಾಯಿ 25,75,000 ಮೌಲ್ಯದ ಬ್ಯಾಂಕ್ ಠೇವಣಿ ಹಾಗೂ ರೂಪಾಯಿ 72,68,554 ಮೌಲ್ಯದ ಇತರೆ ವಸ್ತುಗಳು ಸೇರಿ ಒಟ್ಟು ರೂಪಾಯಿ 2,66,90,001 ಮೌಲ್ಯದ ಚರಾಸ್ತಿ ಪತ್ತೆಯಾಗಿದೆ.
LPG ಅಭಾವದ ವದಂತಿ: ಸಿಲಿಂಡರ್ ದಾಸ್ತಾನಿನ ಬಗ್ಗೆ ಕೇಂದ್ರ ಸರ್ಕಾರದಿಂದ ಮಹತ್ವದ ಮಾಹಿತಿ
ಸ್ಥಿರಾಸ್ತಿ ಹಾಗೂ ಚರಾಸ್ತಿಯನ್ನು ಸೇರಿಸಿ ಒಟ್ಟು ರೂಪಾಯಿ 8,69,54,717 ಮೌಲ್ಯದ ಆಸ್ತಿ ಪತ್ತೆಯಾಗಿದ್ದು, ಆಸ್ತಿಗಳ ಮೂಲದ ಕುರಿತು ಲೋಕಾಯುಕ್ತ ಅಧಿಕಾರಿಗಳು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.
[youtube https://www.youtube.com/watch?v=nCMSZDdXGYY]
