ಶಿರಿಯಾರ: ಸಾಹೇಬ್ರಕಟ್ಟೆಯಲ್ಲಿ ಮಟ್ಕಾ ಅಡ್ಡೆಗೆ ಕೋಟ ಪೊಲೀಸರ ದಾಳಿ

ಈ ಅಕ್ರಮ ದಂಧೆಯ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕಾರ್ಯಾಚರಣೆಯು ಸ್ಥಳೀಯವಾಗಿ ಮಟ್ಕಾ ಮತ್ತು ಜುಗಾರಿ ದಂಧೆಯಲ್ಲಿ ತೊಡಗಿರುವವರಿಗೆ ಎಚ್ಚರಿಕೆಯ ಗಂಟೆಯಾಗಿದ್ದು, ಅಕ್ರಮ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ ಮುಂದುವರಿಯಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಕೋಟ: ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಶಿರಿಯಾರ ಗ್ರಾಮದ ಸಾಹೇಬ್ರಕಟ್ಟೆಯಲ್ಲಿ ಸಾರ್ವಜನಿಕ ಸ್ಥಳದಲ್ಲೇ ನಡೆಯುತ್ತಿದ್ದ ಮಟ್ಕಾ ಜುಗಾರಿ ಅಡ್ಡೆಯ ಮೇಲೆ ಕೋಟ ಪೊಲೀಸರು ಮಿಂಚಿನ ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯ ವೇಳೆ ಓರ್ವ ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ನಗದು ಹಾಗೂ ಮಟ್ಕಾ ಚೀಟಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕೋಟ ಪೊಲೀಸ್ ಠಾಣೆಯ ಪಿಎಸ್‌ಐ ಮಹಾಂತೇಶ್ ಜಾಬಗೌಡ ಅವರಿಗೆ ಶಿರಿಯಾರ ಗ್ರಾಮದ ಸಾಹೇಬ್ರಕಟ್ಟೆ ಗಣೇಶ ಕಾಂಪ್ಲೆಕ್ಸ್ ಎದುರು ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ದಂಧೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭಿಸಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಪಿಎಸ್‌ಐ ಅವರು ತಮ್ಮ ಸಿಬ್ಬಂದಿ ಹಾಗೂ ಪಂಚರೊಂದಿಗೆ ಸ್ಥಳಕ್ಕೆ ತೆರಳಿದರು.

ಪೊಲೀಸರು ಸ್ಥಳಕ್ಕೆ ತಲುಪಿ ಮರೆಯಲ್ಲಿ ನಿಂತು ಗಮನಿಸಿದಾಗ, ಸಾರ್ವಜನಿಕರ ಗುಂಪು ಸೇರಿರುವುದು ಕಂಡುಬಂದಿದೆ. ಆಮಿಷ ಒಡ್ಡಿ ಸಾರ್ವಜನಿಕರಿಂದ ಹಣ ಸಂಗ್ರಹಿಸಿ ಮಟ್ಕಾ ಚೀಟಿ ಬರೆದು ಕೊಡುತ್ತಿರುವುದು ಪೊಲೀಸರ ಗಮನಕ್ಕೆ ಬಂದಿದೆ.

Also Read : ಮಣಿಪಾಲ: ಇಂದ್ರಾಳಿ ರೈಲ್ವೆ ನಿಲ್ದಾಣದ ಬಳಿ ಐಫೋನ್ ಹಿಡಿದು ಅನುಮಾನಾಸ್ಪದವಾಗಿ ನಿಂತಿದ್ದ ಯುವಕ ಅರೆಸ್ಟ್‌

ಮಿಂಚಿನ ದಾಳಿ – ಆರೋಪಿಯ ಬಂಧನ

ಮಧ್ಯಾಹ್ನ ಸುಮಾರು 1:30 ಗಂಟೆಗೆ ಪೊಲೀಸರು ಏಕಾಏಕಿ ದಾಳಿ ನಡೆಸಿದಾಗ, ಸ್ಥಳದಲ್ಲಿದ್ದ ಸಾರ್ವಜನಿಕರು ಚಲ್ಲಾಪಿಲ್ಲಿಯಾಗಿ ಓಡಿ ಹೋಗಿದ್ದಾರೆ. ಈ ವೇಳೆ ಮಟ್ಕಾ ಚೀಟಿ ಬರೆಯುತ್ತಿದ್ದ ನಿರಂಜನ ಎಂಬಾತನನ್ನು ಪೊಲೀಸರು ಸುತ್ತುವರಿದು ವಶಕ್ಕೆ ಪಡೆದಿದ್ದಾರೆ.

ಬಂಧಿತ ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದಾಗ ಸ್ಪೋಟಕ ಮಾಹಿತಿ ಹೊರಬಿದ್ದಿದೆ. ತಾನು ರಘು ಹೆಸ್ಕುತ್ತೂರು ಎಂಬುವವರ ಸೂಚನೆಯಂತೆ ಈ ಮಟ್ಕಾ ಆಟ ಆಡಿಸುತ್ತಿರುವುದಾಗಿ ಒಪ್ಪಿಕೊಂಡಿದ್ದಾನೆ. ಜನರಿಂದ ಸಂಗ್ರಹವಾದ ಹಣವನ್ನು ರಘು ಅವರಿಗೆ ನೀಡುತ್ತಿದ್ದು, ಅದಕ್ಕೆ ಪ್ರತಿಯಾಗಿ ತನಗೆ ಕಮಿಷನ್ ಸಿಗುತ್ತಿತ್ತು ಎಂದು ಆತ ವಿಚಾರಣೆ ವೇಳೆ ತಿಳಿಸಿದ್ದಾನೆ.

Also Read : ಕಾರ್ಕಳ: ಹೆಂಡತಿ ಬಳಿ ಹಣ ಕೇಳಿದ ಪತಿಗೆ ಭರ್ಜರಿ ಉಡುಗೊರೆ: ಬಾಮೈದ, ಪತ್ನಿಯಿಂದಲೇ ಗಂಡನ ಮೇಲೆ ಅಟ್ಯಾಕ್

ಈ ಅಕ್ರಮ ದಂಧೆಯ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕಾರ್ಯಾಚರಣೆಯು ಸ್ಥಳೀಯವಾಗಿ ಮಟ್ಕಾ ಮತ್ತು ಜುಗಾರಿ ದಂಧೆಯಲ್ಲಿ ತೊಡಗಿರುವವರಿಗೆ ಎಚ್ಚರಿಕೆಯ ಗಂಟೆಯಾಗಿದ್ದು, ಅಕ್ರಮ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ ಮುಂದುವರಿಯಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Udupi shiriara sahebrakatte matka raid kota police arrest one

Darshan Shetty Narkali | ದರ್ಶನ್‌ ಶೆಟ್ಟಿ ನಾರ್ಕಳಿ

ದರ್ಶನ್‌ ಶೆಟ್ಟಿ ನಾರ್ಕಳಿ (Darshan Shetty Narkali) ಅವರು ನ್ಯೂಸ್‌ ನೆಕ್ಸ್ಟ್ ಕನ್ನಡ ( News Next Kannada) ವಿಭಾಗದ ಪತ್ರಕರ್ತ. ಮಂಗಳೂರು ವಿವಿಯಲ್ಲಿ ಪದವಿ ಪಡೆದಿದ್ದಾರೆ. ಕಳೆದ 1 ವರ್ಷಗಳಿಂದ ವೆಬ್‌ಸೈಟ್‌ನಲ್ಲಿ ವರದಿಗಾರಿಕೆಯ ಅನುಭವ ಹೊಂದಿದ್ದಾರೆ. ನ್ಯೂಸ್‌ ನೆಕ್ಸ್ಟ್‌ ( News Next Digital) ಸುದ್ದಿ ವಾಹಿನಿಯಲ್ಲಿ ನಿರೂಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಪರಿಸರ, ವಿಜ್ಞಾನ -ತಂತ್ರಜ್ಞಾನ ರಂಗಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಪ್ರವಾಸ, ಕ್ರಿಕೆಟ್ ,ಫೋಟೋಗ್ರಾಫಿ, ಓದು, ಸಿನಿಮಾ ಇವರ ಹವ್ಯಾಸಗಳು. More »

Related Stories