ಬಡಾನಿಡಿಯೂರು ಏಕ ವಿನ್ಯಾಸ ಕಡತ ವಿಚಾರ : ರಘುಪತಿ ಭಟ್ ಆರೋಪಗಳಿಗೆ ಯಶಪಾಲ್ ಸುವರ್ಣ ತಿರುಗೇಟು
ಉಡುಪಿ : ಬಡಾನಿಡಿಯೂರು ಗ್ರಾಮದ ನಿವೇಶನ ಏಕ ವಿನ್ಯಾಸ ಕಡತ ವಿಚಾರದಲ್ಲಿ ಮಾಜಿ ಶಾಸಕ ರಘುಪತಿ ಭಟ್ ತನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಉಡುಪಿ ಶಾಸಕ ಯಶಪಾಲ್ ಸುವರ್ಣ ದಾಖಲೆ ಸಮೇತ ಪ್ರತ್ಯುತ್ತರ ನೀಡಿದ್ದಾರೆ .
ಈ ಕುರಿತು ಮಾತನಾಡಿದ ಶಾಸಕ ಯಶಪಾಲ್ ಸುವರ್ಣ, ಅಧಿಕಾರಿಗಳ ಮಾನಸಿಕ ಸ್ಥೈರ್ಯ ಕುಗ್ಗಿಸುವ ಕಾರ್ಯ ಮಾಡಲಾಗುತ್ತಿದೆ. ಅವರ ಮೇಲೆ ಒತ್ತಡ ಹೇರಬೇಕೆಂದು ಅನಗತ್ಯ ಪ್ರತಿಭಟನೆಯ ಬೆದರಿಕೆ ಹಾಕುತ್ತಿದ್ದಾರೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಕರಾವಳಿಯ ಪ್ರವಾಸೋದ್ಯಮಕ್ಕೂ ತಟ್ಟಿದ ಎಲ್ಪಿಜಿ ಅಭಾವ : ಪ್ರವಾಸಿಗರಿಗೆ ಭಾರೀ ನಿರಾಸೆ
ಈ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶ್ರೀಮತಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿರುವ ಯಶಪಾಲ್ ಸುವರ್ಣ, ಏಕ ವಿನ್ಯಾಸ ಕಡತವನ್ನು ಕಾನೂನು ಪ್ರಕಾರ ಪರಿಶೀಲಿಸಿ ವಿಲೇವಾರಿ ಮಾಡಲು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ತಕ್ಷಣ ಸೂಕ್ತ ನಿರ್ದೇಶನ ನೀಡುವಂತೆ ಮನವಿ ಮಾಡಿದ್ದಾರೆ.



